ADVERTISEMENT

ಪ್ರಕೃತಿ ರೆಸಾರ್ಟ್‌: ಕಾಂಗ್ರೆಸ್ ಶಾಸಕರೊಬ್ಬರು ನಾಪತ್ತೆ ವದಂತಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 3:00 IST
Last Updated 18 ಜುಲೈ 2019, 3:00 IST
   

ಬೆಂಗಳೂರು: ವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲೇ ಕಾಂಗ್ರೆಸ್‌ ಶಾಸಕರು ತಂಗಿರುವ ಪ್ರಕೃತಿ ರೆಸಾರ್ಟ್‌ನಿಂದ ಶಾಸಕರೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳು ಹರಡಿವೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಬುಧವಾರ ರಾತ್ರಿ ಹೊರ ಹೊಗಿದ್ದು ಅವರು ಮತ್ತೆ ರೆಸಾರ್ಟ್‌ಗೆ ವಾಪಾಸು ಆಗಿಲ್ಲ ಎನ್ನಲಾಗಿದೆ. ಶ್ರೀಮಂತ ಪಾಟೀಲ್‌ ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ ಎನ್ನಲಾಗಿದೆ.

ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರು ಕೂಡ ಸದನಕ್ಕೆ ಗೈರಾಗುವ ಸಾಧ್ಯತೆಗಳಿವೆ.

ADVERTISEMENT

ಇದರಿಂದ ಮೈತ್ರಿ ಸರ್ಕಾರದ ಬಲ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.