ADVERTISEMENT

ತಿದ್ದುಪಡಿ ಕಾಯ್ದೆಗಳನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಕಾಂಗ್ರೆಸ್‌ ಮನವಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 12:54 IST
Last Updated 28 ಸೆಪ್ಟೆಂಬರ್ 2020, 12:54 IST
ರಾಜ್ಯಪಾಲರಿಗೆ ಮನವಿ ಪತ್ರ ನೀಡುತ್ತಿರುವ ಕಾಂಗ್ರೆಸ್‌ ನಿಯೋಗ
ರಾಜ್ಯಪಾಲರಿಗೆ ಮನವಿ ಪತ್ರ ನೀಡುತ್ತಿರುವ ಕಾಂಗ್ರೆಸ್‌ ನಿಯೋಗ    

ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಸೋಮವಾರ ರಾಜ್ಯಪಾಲರಿಗೆ ಮನವಿ ಮಾಡಿದೆ.

ಸೋಮವಾರ ಮಧ್ಯಾಹ್ನ ರಾಜ್ಯಪಾಲರ ಬಳಿಗೆ ನಿಯೋಗ ತೆರಳಿದ ಕಾಂಗ್ರೆಸ್‌ ಈ ಸಂಬಂಧ ಮನವಿ ಸಲ್ಲಿಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನಿಯೋಗದಲ್ಲಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.