ADVERTISEMENT

ಮತಾಂಧ ಶಕ್ತಿಗಳ ಹಿಂದೆ ಕಾಂಗ್ರೆಸ್‌ ಕೈವಾಡ: ನಳಿನ್‌ಕುಮಾರ್‌ ಕಟೀಲ್‌

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 11:14 IST
Last Updated 17 ಏಪ್ರಿಲ್ 2022, 11:14 IST
ಬಿಜೆಪಿ ಕಾರ್ಯಕಾರಿಣಿಯ ಸಮಾರೋಪದಲ್ಲಿ ಮಾತನಾಡಿದ ಕಟೀಲ್‌
ಬಿಜೆಪಿ ಕಾರ್ಯಕಾರಿಣಿಯ ಸಮಾರೋಪದಲ್ಲಿ ಮಾತನಾಡಿದ ಕಟೀಲ್‌   

ಹೊಸಪೇಟೆ (ವಿಜಯನಗರ): ‘ಡಿ.ಜೆ.ಹಳ್ಳಿ, ಕೆ.ಜೆ. ಹಳ್ಳಿ ಘಟನೆಯ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ. ಪೊಲೀಸರ ಮೇಲೆ ಮತಾಂಧ ಶಕ್ತಿಗಳು ದಾಳಿ ನಡೆಸಿದ್ದಾರೆ. ಆ ಶಕ್ತಿಗಳ ಹಿಂದೆ ಕಾಂಗ್ರೆಸ್‌ ಕೈವಾಡವಿದೆ. ಅದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕಾರಿಣಿಯ ಸಮಾರೋಪದಲ್ಲಿ ಮಾತನಾಡಿದ ಅವರು, ‘ಮತಾಂಧ ಶಕ್ತಿಗಳ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ. ಒಂದು ವಾಟ್ಸ್ಯಾಪ್‌ ಸಂದೇಶ ಆಧರಿಸಿ ಸಮಾಜದಲ್ಲಿ ಗೊಂದಲ ಉಂಟು ಮಾಡುವುದು ಸರಿಯಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT