ರಾಮನಗರ: ಜೆಡಿಎಸ್ ವಿರುದ್ಧ ರಾಮನಗರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಟ್ಟಾಗಿ ರಾಜಕೀಯ ಲೆಕ್ಕಾಚಾರ ಮಾಡುತ್ತಿವೆ. ಅಂತಿಮವಾಗಿ ಮತದಾರರು ತೀರ್ಮಾನಿಸುತ್ತಾರೆ ಎಂದು ರಾಮನಗರ ಕ್ಷೇತ್ರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಮನಗರ ಕ್ಷೇತ್ರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಕುರಿತು ಮಂಗಳವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ‘ ಮಂಡ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದವರು ಸೇರಿ ಚಕ್ರವ್ಯೂಹ ರಚಿಸಿ ನನ್ನನ್ನು ಸೋಲಿಸಿದ್ದರು. ಆದರೆ 5 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದೆ. ಅಭ್ಯರ್ಥಿಗಳನ್ನು ಹಾಕುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಅದನ್ನು ಅವರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.