ಬೆಂಗಳೂರು: ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಬೇಕಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಪರಸ್ಪರ ಮೇಲಾಟ ನಡೆಸುತ್ತಿರುವುದನ್ನು ಕಾಂಗ್ರೆಸ್ ಕಟುವಾಗಿ ಖಂಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, 'ಎರಡೂ ಇಲಾಖೆಗಳು ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ' ಎಂದು ಟೀಕಿಸಿದ್ದಾರೆ.
'ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವವರೆಗಾದರೂಎರಡೂ ಇಲಾಖೆಯನ್ನ ವಿಲೀನಗೊಳಿಸಿ ಒಂದೇ ವ್ಯವಸ್ಥೆಯ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.