ADVERTISEMENT

ಕಲಾಪ ಸಲಹಾ ಸಮಿತಿ ಸಭೆಗೆ ಕಾಂಗ್ರೆಸ್‌ ಗೈರು

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 5:23 IST
Last Updated 9 ಮಾರ್ಚ್ 2021, 5:23 IST
ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ    

ಬೆಂಗಳೂರು: ವಿಧಾನ ಸಭೆ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್‌ ನಿರ್ಧರಿಸಿದೆ.

ಮಂಗಳವಾರ (ಮಾರ್ಚ್‌ 9) ಬೆಳಿಗ್ಗೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಜೆಟ್‌ ಮಂಡಿಸಿದ್ದು, ಮಂಗಳವಾರದಿಂದ ಬಜೆಟ್‌ ಮೇಲೆ ಚರ್ಚೆ ನಡೆಯಲಿದೆ. ಆದರೆ, ಬಜೆಟ್‌ ಮಂಡನೆಯ ಆರಂಭವಾಗುತ್ತಿದ್ದಂತೆ, ‘ಅನೈತಿಕ ಸರ್ಕಾರ ಬಜೆಟ್‌ ಮಂಡಿಸುತ್ತಿದೆ’ ಎಂದು ಪ್ರತಿಭಟಿಸಿ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ನಡೆಸಿದ್ದರು.

ADVERTISEMENT

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕರ ಸಭೆ ರಾತ್ರಿ ನಡೆದಿತ್ತು. ಈ ಸಭೆಯಲ್ಲಿ ಕಲಾಪ ಸಲಹಾ ಸಮಿತಿ ಸಭೆಗೆ ಗೈರಾಗಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.