ADVERTISEMENT

ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 7:32 IST
Last Updated 18 ಜುಲೈ 2022, 7:32 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್   

ಬೆಂಗಳೂರು: ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಹುಚ್ವ ವೆಂಕಟ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಪತ್ರ ಬಂದಿದೆ ಎಂದು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಈ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, 'ಭಾನುವಾರ ರಾತ್ರಿ ಇ-ಮೇಲ್ ಮೂಲಕ ಬೆದರಿಕೆ ಬಂದಿತ್ತು. ಸೋಮವಾರ ಬೆಳಿಗ್ಗೆ ಶಿಕ್ಷಕರು ಮತ್ತು ಸಿಬ್ಬಂದಿ ಶಾಲೆಗೆ ಬಂದ ಬಳಿಕ ವಿಷಯ ಗೊತ್ತಾಯಿತು. ಅಷ್ಟರಲ್ಲಾಗಲೇ ಮಕ್ಕಳು ಶಾಲೆಗೆ ಬಂದಿದ್ದರು' ಎಂದರು.

ವಿದ್ಯಾರ್ಥಿಗಳನ್ನು ಶಾಲೆಯಿಂದ ಸ್ಥಳಾಂತರ ಮಾಡಲಾಗಿದೆ. ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.