ತುಮಕೂರು: ದೇವೇಗೌಡರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ನಾನು ಬಿಜೆಪಿ ಅಭ್ಯರ್ಥಿ ಬಸವರಾಜ್ ಬೆಂಬಲಿಸಿದೆ. ಆದರೆ ದೇವೇಗೌಡರ ಬಗ್ಗೆ ಗೌರವ ಇದೆ. ನನ್ನ ಒಮ್ಮೆ ಅವರು ಶಾಸಕನನ್ನಾಗಿ ಮಾಡಿದ್ದರು. ಆ ಋಣ ಇದೆ. ಆದರೆ ಅವರ ಅಕ್ಕ ಪಕ್ಕ ಇದ್ದವರು ನಮ್ಮ ಮೇಲೆ ಚಾಡಿ ಹೇಳಿದರು. ನಾವು ದೂರವಾದೆವು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಾಜಣ್ಣ ಹೇಳಿದರು.
ಸಿದ್ದಗಂಗಾ ಮಠಕ್ಕೆ ಬಂದಾಗ ನನ್ನ ಪಕ್ಕದ ಮನೆಗೆ ದೇವೇಗೌಡರು ಬಂದರೂ ಕೂಡ ನಮ್ಮಮನೆಗೆ ಬರಲಿಲ್ಲ. ಕೆಲವನ್ನಷ್ಟೇ ನಂಬಿಕೊಂಡು ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸೋತರು. ಅವರು ಈ ವಯಸ್ಸಿನಲ್ಲಿಯೂ ಹೋರಾಟ ಮಾಡುವ ಗುಣವನ್ನು ಮೆಚ್ಚುವೆ ಎಂದರು.
ಶಾಸಕ ಶ್ರೀನಿವಾಸ್ ತಂದೆ ರಾಮೇಗೌಡರು ಗುಬ್ಬಿ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು. ಶ್ರೀನಿವಾಸ್ ನಮ್ಮ ಹುಡುಗ ಎಂದರು.
ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಬಹಳಷ್ಟು ಜನರು ಹೊರ ಹೋಗುವರು, ಮತ್ತೆ ಕೆಲವರು ಪಕ್ಷಕ್ಕೆ ಬರುವರು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.