ADVERTISEMENT

ಜೆಡಿಎಸ್‌ ಶಾಸಕ ಪುಟ್ಟರಾಜು–ಸಿದ್ದರಾಮಯ್ಯ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 4:10 IST
Last Updated 28 ಜನವರಿ 2022, 4:10 IST
ಸಿ.ಎಸ್‌. ಪುಟ್ಟರಾಜು,  ಸಿದ್ದರಾಮಯ್ಯ
ಸಿ.ಎಸ್‌. ಪುಟ್ಟರಾಜು, ಸಿದ್ದರಾಮಯ್ಯ   

ಬೆಂಗಳೂರು: ಮೇಲುಕೋಟೆ ಜೆಡಿಎಸ್‌ ಶಾಸಕ ಸಿ.ಎಸ್‌. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನುಗುರುವಾರ ರಾತ್ರಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಸಂಜೆ 7.30ರ ಸುಮಾರಿಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಟ್ಟರಾಜು ಬಂದಿದ್ದರು. ಇಬ್ಬರೂ ಸುಮಾರು 1 ಗಂಟೆ ರಾಜ್ಯ ರಾಜಕೀಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಮೇಲುಕೋಟೆಯ ವಲ್ಲಿ ಡೆಂಕಾಪುರ ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನದ ಉದ್ಘಾಟನೆ ಫೆ. 14ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಪುಟ್ಟರಾಜು ಬಂದಿದ್ದರು ಎಂದೂ ಮೂಲಗಳು
ಹೇಳಿವೆ.

‘ಈ ಹಿಂದೆಯೂ ಎರಡು ಬಾರಿ ಪುಟ್ಟರಾಜು ಮತ್ತು ಸಿದ್ದರಾಮಯ್ಯ ನಡುವೆ ಮಾತುಕತೆ ನಡೆದಿದ್ದು, ಕಾಂಗ್ರೆಸ್‌ ಸೇರುವ ಬಗ್ಗೆ ಪುಟ್ಟರಾಜು ಒಲವು ವ್ಯಕ್ತಪಡಿಸಿದ್ದಾರೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.