ADVERTISEMENT

ಬಿಎಸ್‌ವೈ ಬೆಂಬಲಿಸಿದ್ದು ನಾಯಕರ ವೈಯಕ್ತಿಕ ವಿಚಾರ: ಡಿ.ಕೆ ಸುರೇಶ್‌

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 18:34 IST
Last Updated 21 ಜುಲೈ 2021, 18:34 IST
ಡಿ.ಕೆ ಸುರೇಶ್‌
ಡಿ.ಕೆ ಸುರೇಶ್‌   

ನವದೆಹಲಿ:‘ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ. ಪಾಟೀಲ ಯಾವ ಅರ್ಥದಲ್ಲಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಅವರೊಂದಿಗೆ ಮಾತನಾಡುವೆ’ ಎಂದು ವಿಧಾನಸಭೆ ವಿರೋಧ ಪಕ್ಷದ
ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಬುಧವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಮುಖಂಡರು ಈ ರೀತಿ ಬೆಂಬಲ ಘೋಷಿಸಿದ್ದು ಪಕ್ಷದ ನಿಲುವಲ್ಲ. ಅದು ವೈಯಕ್ತಿಕ‘ ಎಂದು ಹೇಳಿದರು.

ಹೇಳಿಕೆ ನೀಡಬಾರದಿತ್ತು: ‘ಹಿರಿಯ ಮುಖಂಡರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ. ಪಾಟೀಲ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸಿ ಹೇಳಿಕೆ ನೀಡಬಾರದಿತ್ತು’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ ಅಭಿಪ್ರಾಯ ಪಟ್ಟರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮ್ಮ ಸಮುದಾಯದ ಮುಖಂಡರಿಗೆ ಬೆಂಬಲ ವ್ಯಕ್ತಪಡಿಸುವುದು ವೈಯಕ್ತಿಕ ವಿಚಾರ. ಆದರೆ, ಇನ್ನೊಂದು ಪಕ್ಷದ ಮುಖಂಡರಿಗೆ ಬೆಂಬಲ ಘೋಷಿಸುವುದು ಸೂಕ್ತವಲ್ಲ. ಆದರೂ ಅದು ಅವರವರ ವೈಯಕ್ತಿಕ ವಿಚಾರ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.