ಬೆಂಗಳೂರು: ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಗುರುವಾರ ಇಲ್ಲಿ ಆರಂಭವಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಉಪಸ್ಥಿತರಿದ್ದಾರೆ.
ಸಭೆಯು ಮೊದಲಿಗೆ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿತು. ಯೋಧರ ಶೌರ್ಯ, ತ್ಯಾಗ, ಬಲಿದಾನವನ್ನು ಸಿದ್ದರಾಮಯ್ಯ ಗುಣಗಾನ ಮಾಡಿದರು. ಯೋಧರ ಆತ್ಮಕ್ಕೆ ಅವರು ಶಾಂತಿ ಕೋರಿದರು.
ಹುತಾತ್ಮ ಯೋಧರ ಗೌರವಾರ್ಥ ಸಭೆ ಮೌನ ಆಚರಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.