ADVERTISEMENT

ಕಾಂಗ್ರೆಸ್‌ ಶಾಸಕರು ನನ್ನನ್ನು ಸಂಪರ್ಕಿಸಿದ್ದಾರೆ: ಸಚಿವ ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 20:05 IST
Last Updated 4 ಅಕ್ಟೋಬರ್ 2021, 20:05 IST
ಎಸ್.ಟಿ. ಸೋಮಶೇಖರ್
ಎಸ್.ಟಿ. ಸೋಮಶೇಖರ್   

ಬೆಂಗಳೂರು: ‘ಬಿಜೆಪಿಯಿಂದ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ. ಆದರೆ, ಕಾಂಗ್ರೆಸ್‌ನ ಕೆಲವು ಶಾಸಕರು ನನ್ನನ್ನು ಸಂಪರ್ಕಿಸಿದ್ದಾರೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

‘ನಮಗೆ ನೀವು ಬೇಡ್ರಪ್ಪಾ, ಬರುವುದಾದರೆ ಬಿಜೆಪಿ ಅಧ್ಯಕ್ಷರನ್ನು ಸಂಪರ್ಕಿಸಿ’ ಎಂದು ಹೇಳಿರುವುದಾಗಿ ಅವರು ಬಿಜೆ
ಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಬಗ್ಗೆ ಗೊತ್ತಿರುವವರು ಆ ಪಕ್ಷಕ್ಕೆ ಹೋಗುವುದಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.