ADVERTISEMENT

ಜುಲೈ 9ಕ್ಕೆ ಶಾಸಕಾಂಗ ಸಭೆ ಕರೆದ ಕಾಂಗ್ರೆಸ್‌ 

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 12:34 IST
Last Updated 7 ಜುಲೈ 2019, 12:34 IST
   

ಬೆಂಗಳೂರು: ರಾಜ್ಯದಲ್ಲಿ ತೊಲೆದೋರಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಮಂಗಳವಾರ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕೆಸಿ ವೇಣುಗೋಪಾಲ್‌ ಮತ್ತು ಕಾಂಗ್ರೆಸ್ ಅಧ್ಯಕ್ಷದಿನೇಶ್‌ಗುಂಡೂರಾವ್ ಅವರೂ ಸಭೆಯಲ್ಲಿ ಹಾಜರಿರಲಿದ್ದಾರೆ.ಸಭೆಗೆ ಎಲ್ಲ ಶಾಸಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಸಭೆಗೆ ಗೈರಾದರೆ, ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಶಾಸಕರಿಗೆ ಸೂಚಿಸಲಾಗಿದೆ.

ಅದೇ ದಿನ ಶಾಸಕರ ರಾಜೀನಾಮೆ ಪತ್ರದ ಪರಿಶೀಲನೆಯೂ ನಡೆಯಲಿದೆ. ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ಮಂಗಳವಾರ ಪರಿಶೀಲನೆ ನಡೆಸುವುದಾಗಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಶನಿವಾರ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು.

ADVERTISEMENT

ಇತ್ತ ಜೆಡಿಎಸ್‌ ಕೂಡ ಭಾನುವಾರರಾತ್ರಿ ಮಹತ್ವದ ಸಭೆ ನಡೆಸುತ್ತಿದೆ ಎಂದು ಹೇಳಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.