ADVERTISEMENT

ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಸ್ಥಾನ ಕರ್ನಾಟಕ ಮಾದರಿಗೆ ದೊರೆತ ಗೌರವ: ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2023, 10:51 IST
Last Updated 23 ಡಿಸೆಂಬರ್ 2023, 10:51 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ರಚನಾ ಸಮಿತಿಯಲ್ಲಿ ತಮ್ಮನ್ನೂ ಸೇರಿಸಿಕೊಂಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ದೇಶದ ಜನತೆಗೆ ಕರ್ನಾಟಕ ಮಾದರಿಯ ಆಡಳಿತದ ಅನುಕೂಲಗಳು ದೊರೆಯುವಂತಾಗಲಿ ಎಂದು ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕರ್ನಾಟಕ ಮಾದರಿ ಆಡಳಿತವನ್ನು ಪಕ್ಷಾತೀತಾವಾಗಿ ದೇಶದ ಜನರು ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ಭಾವಿಸಿದ್ದೇನೆ’ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

‘ಪಕ್ಷದ ಪ್ರಣಾಳಿಕೆ ಎನ್ನುವುದು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿ ಅಲ್ಲ, ಜನತೆಗೆ ನಾವು ನೀಡುವ ವಚನವಾಗಿದ್ದು ಅದನ್ನು ಅನುಷ್ಠಾನಕ್ಕೆ ತರುವುದು ನಿಜವಾದ ರಾಜಧರ್ಮ’ಎಂದು ಹೇಳಿದ್ದಾರೆ.

ಈ ಹಿಂದೆ ನಮ್ಮ ಸರ್ಕಾರ ನೀಡಿದ್ದ ‘ಸರ್ವರಿಗೂ ಸಮಪಾಲು - ಸಮಬಾಳು’ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಆಡಳಿತವನ್ನು ನೀಡಿ ಜನತೆಯ ವಿಶ್ವಾಸಾರ್ಹತೆಯನ್ನು ಗಳಿಸಿದ್ದೆವು. ಅದೇ ಹಾದಿಯಲ್ಲಿ ಈಗಿನ ಸರ್ಕಾರ ಮುನ್ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.