ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ವಿಧಾನಸೌಧದತ್ತ ಎತ್ತಿನ ಬಂಡಿಯಲ್ಲಿ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ವಿಂಡ್ಸರ್ ಮ್ಯಾನರ್ ವೃತ್ತದ ಬಳಿ ನಾಲ್ಕು ಎತ್ತಿನ ಬಂಡಿಗಳನ್ನು ಪೊಲೀಸರು ತಡೆಹಿಡಿದಿದ್ದಾರೆ. ಎರಡು ಎತ್ತಿನ ಬಂಡಿಗಳಿಗೆ ಮಾತ್ರ ವಿಧಾನಸೌಧದತ್ತ ತೆರಳಲು ಅವಕಾಶ ನೀಡಲಾಗಿದೆ.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಒಂದೇ ಎತ್ತಿನ ಬಂಡಿಯಲ್ಲಿ ಸಾಗುತ್ತಿದ್ದಾರೆ. ಸಿದ್ದರಾಮಯ್ಯ ಬಂಡಿ ಚಲಾಯಿಸುತ್ತಿದ್ದಾರೆ.
ಸಂಚಾರ ದಟ್ಟಣೆ: ಕಾಂಗ್ರೆಸ್ ಪ್ರತಿಭಟನೆಯಿಂದಾಗಿ ವಿಧಾನಸೌಧದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.