ADVERTISEMENT

ಲೋಕಸಭಾ ಚುನಾವಣೆ: ಕಲಬುರ್ಗಿಯಲ್ಲಿ ರಾಹುಲ್‌ ರಣಕಹಳೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2019, 9:12 IST
Last Updated 18 ಮಾರ್ಚ್ 2019, 9:12 IST
ಚಿತ್ರ: ಕಾಂಗ್ರೆಸ್‌ ಟ್ವಿಟರ್‌
ಚಿತ್ರ: ಕಾಂಗ್ರೆಸ್‌ ಟ್ವಿಟರ್‌   

ಕಲಬುರ್ಗಿ: ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುತ್ತಿರುವ ‘ಕಾಂಗ್ರೆಸ್‌ ಪರಿವರ್ತನಾ ರ‍್ಯಾಲಿ’ಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿದ್ದಾರೆ.

ವಿಶೇಷ ವಿಮಾನದ ಮೂಲಕ ಬಂದಿಳಿದ ರಾಹುಲ್‌ ಅವರನ್ನು ಸಂಸದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ, ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರು ಹೂಗುಚ್ಛ ನೀಡಿ ಬರ ಮಾಡಿಕೊಂಡರು.

ರ‍್ಯಾಲಿ ಮುಗಿದ ನಂತರ ಇಂದು ಸಂಜೆ ಬೆಂಗಳೂರಿನ ಮಾನ್ಯತಾ ಟೆಕ್‌ ಪಾರ್ಕ್‌ ನಡೆಯಲಿರುವ ಸಂವಾದದಲ್ಲಿ ರಾಹುಲ್‌ ಭಾಗಿಯಾಗಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.