ADVERTISEMENT

ಅಶ್ವತ್ಥನಾರಾಯಣ ಮೌನಿ ಬಾಬಾ ಏಕೆ– ಉಗ್ರಪ್ಪ

​ಪ್ರಜಾವಾಣಿ ವಾರ್ತೆ
Published 2 ಮೇ 2022, 19:39 IST
Last Updated 2 ಮೇ 2022, 19:39 IST
ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ
ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ   

ಬೆಂಗಳೂರು: ‘ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿರುವ ಮಾಗಡಿ ತಾಲ್ಲೂಕಿನ ದರ್ಶನ್ ಗೌಡ ಅವರಿಂದ ₹ 80 ಲಕ್ಷಕ್ಕೂ ಹೆಚ್ಚಿನ ಹಣ ಪಡೆಯಲಾಗಿದ್ದು, ಇದರ ಹಿಂದೆ ಪ್ರಭಾವಿ ಸಚಿವರ ಸಹೋದರನ ಮೇಲೆ ಆರೋಪವಿದೆ. ಪ್ರಭಾವಿ ಸಚಿವರು ಕರೆ ಮಾಡಿ ಆ ಅಭ್ಯರ್ಥಿಯನ್ನು ವಿಚಾರಣೆಯಿಂದ ಬಿಡುಗಡೆಗೊಳಿಸಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದರು.

ಕೆ‍ಪಿಸಿಸಿ ಉಪಾಧ್ಯಕ್ಷ ಎಚ್.ಎಂ. ರೇವಣ್ಣ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ರಾಮನಗರ ಜಿಲ್ಲೆ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಈ ವಿಚಾರದಲ್ಲಿ ಮೌನಿ ಬಾಬಾ ಆಗಿರುವುದೇಕೆ? ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮ ಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಗರಾಜ್ ಹಾಗೂ ಸೌಮ್ಯಾ ಎಂಬುವವರ ಬಂಧನವಾಗಿದ್ದು, ಆ ಪ್ರಕರಣದಲ್ಲೂ ಅವರು ಮೌನವಾಗಿ
ರುವುದು ಸಂಶಯ ಹುಟ್ಟು ಹಾಕಿದೆ’ ಎಂದರು. ‘ದರ್ಶನ್ ಗೌಡನಿಗೆ ನೋಟಿಸ್‌ ನೀಡಿದ್ದರೂ ಬಂಧಿಸಿಲ್ಲ ಯಾಕೆ? ಹಣ ನೀಡಿರುವ ವಿಷಯ ಬಹಿರಂಗ ಆಗಬಹುದೆಂದು ಆತನನ್ನು ಬಂಧಿಸದೇ, ವಿಚಾರಣೆ ನಡೆಸದಂತೆ ಸಂಚು ರೂಪಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT