ADVERTISEMENT

ಪಕ್ಷ ತೊರೆದಿರುವ ಶಾಸಕರನ್ನು ಪ್ರಳಯವಾದರೂ ಮರಳಿ ಸೇರಿಸಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 1:26 IST
Last Updated 24 ಜುಲೈ 2019, 1:26 IST
ಸಿದ್ದರಾಮಯ್ಯ 
ಸಿದ್ದರಾಮಯ್ಯ    

ಬೆಂಗಳೂರು: ‘ಪಕ್ಷ ತೊರೆದಿರುವ ಶಾಸಕರನ್ನು ಪ್ರಳಯವಾದರೂ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಮಂಗಳವಾರ ಸಭಾಧ್ಯಕ್ಷ ಕೆ.ಆರ್‌. ರಮೇಶ್‌ ಕುಮಾರ್‌ ಮಾತನಾಡಿ, ‘ಒಂದು ವೇಳೆ ಬಿಜೆಪಿ ಸರ್ಕಾರದಲ್ಲಿ ಗೊಂದಲ ಸೃಷ್ಟಿಯಾಗಿ ನಿಮ್ಮ ಶಾಸಕರು ವಾಪಸು ಬಂದರೆ ಏನು ಮಾಡುತ್ತೀರಿ’ ಎಂದು ಪ್ರಶ್ನಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಬಗೆದವರನ್ನು ಮರಳಿ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರಿಗೆ ತ್ರಿಶಂಕು ಸ್ವರ್ಗ ಖಚಿತ’ ಎಂದರು.

ADVERTISEMENT

**

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.