ಬೆಂಗಳೂರು:ಕೇಂದ್ರ ಸರ್ಕಾರವು ತೆರಿಗೆ–ಸುಂಕ ರೂಪದಲ್ಲಿ ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪಾಲಿನಲ್ಲಿ ಈ ವರ್ಷವೂ ಕಡಿತವಾಗಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ಕೇಂದ್ರ ಸರ್ಕಾರವು ತೆರಿಗೆ–ಸುಂಕ ಹಾಗೂ ಸಹಾಯಾನುದಾನದ ರೂಪದಲ್ಲಿ ಕರ್ನಾಟಕಕ್ಕೆ ನೀಡಬೇಕಾದ ಪಾಲು ವರ್ಷದಿಂದ ವರ್ಷಕ್ಕೆ ಇಳಿಯುತ್ತಿದ್ದು, ಒಂದೇ ವರ್ಷದಲ್ಲಿ ₹9,225 ಕೋಟಿ ಕಡಿಮೆಯಾಗಿದೆ ಎಂದು ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು.
ವರದಿಯನ್ನುಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದ ತೆರಿಗೆ ಸುಂಕದಲ್ಲಿ ಪ್ರತಿವರ್ಷದಂತೆ ಈ ವರ್ಷವೂ 9,225 ಕೋಟಿ ಖೋತಾ ಆಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ.
'ಡಬಲ್ ಇಂಜಿನ್ ಸರ್ಕಾರಗಳು, 25 ಬಿಜೆಪಿ ಸಂಸದರು ಈ ಬಗ್ಗೆ ದಿವ್ಯ ಮೌನ ವಹಿಸಿದ್ದೇಕೆ?' ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳನ್ನು ಪ್ರಶ್ನಿಸಿದೆ.
ಮುಂದುವರಿದು, ಆಡಳಿತ ವೈಫ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿಯು ಧರ್ಮ ಕಲಹ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದೂ ಆರೋಪಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.