ADVERTISEMENT

ನೆರೆ ಪರಿಹಾರ ನೀಡದ ಸರ್ಕಾರ ರೈತರ ಅರ್ಜಿಯಲ್ಲಿ ದೋಷ ಹುಡುಕುತ್ತಿದೆ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಡಿಸೆಂಬರ್ 2021, 11:09 IST
Last Updated 26 ಡಿಸೆಂಬರ್ 2021, 11:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ರೈತರಿಗೆ ನೆರೆ ಪರಿಹಾರ ನೀಡುವ ಯೋಗ್ಯತೆ ಇಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

‘ಕುಣಿಯಲಾರದವ ನೆಲ ಡೊಂಕು ಎನ್ನುವಂತೆ, ಪರಿಹಾರ ಕೊಡಲಾಗದ ಸರ್ಕಾರ ರೈತರ ಅರ್ಜಿಯಲ್ಲೂ ಕೊಂಕು ಹುಡುಕುತ್ತಿದೆ. ನೆರೆ ಪರಿಹಾರ ನೀಡಲು ಯೋಗ್ಯತೆ ಇಲ್ಲದ ಸರ್ಕಾರ ರೈತರ ಅರ್ಜಿಯಲ್ಲಿ ಸಣ್ಣ ಪುಟ್ಟ ದೋಷಗಳನ್ನು ನೆಪವಾಗಿಟ್ಟುಕೊಂಡು ತಿರಸ್ಕರಿಸುತ್ತಿರುವುದು ಅಕ್ಷಮ್ಯ. ಅರ್ಜಿ ಪ್ರಕ್ರಿಯೆಯನ್ನು ಸರಳಿಕರಿಸುವತ್ತ ಕೃಷಿ ಸಚಿವರು ಗಮನಿಸಬೇಕು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬೆಂಗಳೂರಿನ ಕಸದ ಸಮಸ್ಯೆಗೆ ಸಂಬಂಧಿಸಿದಂತೆಯೂ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

‘ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಬೆಂಗಳೂರಿನ ಕಸದ ಸಮಸ್ಯೆ ಉಲ್ಬಣಿಸುತ್ತದೆ ಎಂದರೆ ಬಿಜೆಪಿಯ ಆಡಳಿತ ಕಸಕ್ಕಿಂತಲೂ ಕಡೆಯಾಗಿದೆ ಎಂದರ್ಥ! ಬಿಬಿಎಂಪಿ ಕಸ ವಿಲೇವಾರಿಯ ಗುತ್ತಿಗೆದಾರರ ಬಿಲ್ ಪಾವತಿಸದಿರುವುದರಿಂದ ಗುತ್ತಿಗೆದಾರರು, ಪೌರಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬಿಜೆಪಿಯ ಕೆಟ್ಟ ಆಡಳಿತಕ್ಕೆ ಇದೊಂದು ಸಣ್ಣ ಉದಾಹರಣೆ ಅಷ್ಟೇ!’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.