ADVERTISEMENT

ಪ್ರಧಾನಿ ನರೇಂದ್ರ ಮೋದಿ ದೇಶದ್ರೋಹದ ಕೆಲಸ ಮಾಡಿದ್ದಾರೆ: ಕಾಂಗ್ರೆಸ್‌ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜುಲೈ 2023, 10:03 IST
Last Updated 27 ಜುಲೈ 2023, 10:03 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ    

ಬೆಂಗಳೂರು: ಬಿಜೆಪಿಯವರಿಗೆ ಇಂಡಿಯಾ ಮೇಲೆ ದ್ವೇಷ ಏಕೆ ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಟೀಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಅಲ್ಲದೇ ಭಾರತದ ಬಗ್ಗೆ ಬಿಜೆಪಿ ಪ್ರಧಾನಿ ಮೋದಿಗೆ ಕಿಂಚಿತ್ತೂ ಗೌರವವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ADVERTISEMENT

ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಹೀಗಿದೆ:

‘India ಪದವನ್ನು ಈಸ್ಟ್ ಇಂಡಿಯಾ, ಇಂಡಿಯನ್ ಮುಜಾಹಿದ್ದೀನ್ ಗಳಿಗೆ ಹೋಲಿಸಿದ ಮೋದಿಯವರು ದೇಶದ್ರೋಹದ ಕೆಲಸ ಮಾಡಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ದೇಶದ ಹೆಸರನ್ನು ಅವಮಾನಿಸುವ ಮಟ್ಟಕ್ಕೆ ಇಳಿಯಬಾರದು, ಹಿಂದೆ ವಿದೇಶಗಳಲ್ಲಿ ನಿಂತು ಭಾರತದ ಬಗ್ಗೆ ಅವಮಾನಕರವಾಗಿ ಮಾತಾಡಿದ ಮೋದಿಗೆ ದೇಶದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ ಎನ್ನುವುದು ಸಾಬೀತಾಗಿದೆ. ಬಿಜೆಪಿಗರಿಗೆ INDIA ಮೇಲೆ ದ್ವೇಷವೇಕೆ?’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.