ADVERTISEMENT

ರೈತ ಹೋರಾಟಕ್ಕೆ ಬೆಂಬಲ: ಕಾಂಗ್ರೆಸ್‌ ಶಾಸಕರಿಂದ ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 8:06 IST
Last Updated 10 ಡಿಸೆಂಬರ್ 2020, 8:06 IST
   

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ತುರ್ತು ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಫ್ರೀಡಂ ಪಾರ್ಕ್‌ಗೆ ತೆರಳಿ ರೈತರ ಹೋರಾಟದಲ್ಲಿ ಭಾಗವಹಿಸಲಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೀಗಾಗಿ ಶಾಸಕಾಂಗ ಪಕ್ಷದ ಸಭೆಯಿಂದ ನೇರವಾಗಿ ಫ್ರೀಡಂ ಪಾರ್ಕ್‌ಗೆ ಕಾಲ್ನಡಿಗೆಯಲ್ಲಿ ಹೊರಟರು. ಅಲ್ಲದೆ, ರೈತ ಹೋರಾಟ ರೂಪಿಸಲು ಕೂಡಾ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಕಾನೂನು ತಜ್ಞರಿಂದ ಸಲಹೆ ಪಡೆದ ಬಳಿಕ ಚುನಾವಣಾ ಆಯೋಗದ ಕದ ತಟ್ಟಲು ಕೂಡಾ ಶಾಸಕಾಂಗ ಪಕ್ಷದ ಸಭೆ ತೀರ್ಮಾನಿಸಲಾಗಿದೆ ಎಂದೂ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.