ADVERTISEMENT

ಕಾಂಗ್ರೆಸ್‌ನಿಂದ ಮೂವರು ಅಮಾನತು

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 20:10 IST
Last Updated 21 ಜನವರಿ 2020, 20:10 IST
   

ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದ ಮೂವರು ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಮಂಜುನಾಥ್, ಮಾಜಿ ಕಾರ್ಯದರ್ಶಿಗಳಾದ ಎ.ಕೆಂಚೇಗೌಡ, ಎಂ.ಜಿ.ಬಲರಾಮ್ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಮಾನತು ಮಾಡಿದ್ದಾರೆ.

ಜ.20ರಂದು ಕಚೇರಿ ಎದುರು ಪಕ್ಷದ ನಾಯಕರು ಹಾಗೂ ನಾಯಕತ್ವದ ವಿರುದ್ಧ ಕೆಲವರು ಘೋಷಣೆ ಕೂಗಿ, ಭಿತ್ತಿಪತ್ರ ಪ್ರದರ್ಶಿಸಿದ್ದರು. ಇದನ್ನು ಎಐಸಿಸಿ ಗಂಭೀರವಾಗಿ ತೆಗೆದುಕೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಎಂದೇ ಪರಿಗಣಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.