ADVERTISEMENT

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಭಾನುವಾರಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 10:45 IST
Last Updated 25 ನವೆಂಬರ್ 2022, 10:45 IST
   

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ‌ ಸಭೆಯನ್ನು ಮಾಜಿ ಶಾಸಕ ಶ್ರೀಶೈಲ ಬಿದರೂರು ನಿಧನದ ಕಾರಣದಿಂದ ಭಾನುವಾರಕ್ಕೆ ಮುಂದೂಡಲಾಗಿದೆ.

ನಗರದ ವರ್ತೂರಿನ ರೆಸಾರ್ಟ್ ಒಂದರಲ್ಲಿ ಶುಕ್ರವಾರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ, ಗದಗ ಕ್ಷೇತ್ರಗಳ ಮಾಜಿ‌ ಶಾಸಕ ಶ್ರೀಶೈಲ ಬಿದರೂರು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಭೆ ಆರಂಭದ ಸಮಯದಲ್ಲೇ ಮಾಜಿ ಶಾಸಕರ ನಿಧನದ ಸುದ್ದಿಯೂ ಬಂತು. ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡಿ, ಸಭೆಯನ್ನು ಮುಂದೂಡಲಾಯಿತು.

ADVERTISEMENT

ಈ ಕುರಿತು ಪತ್ರಕರ್ತರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷದ ನಾಯಕರಾದ ಶ್ರೀಶೈಲ ಬಿದರೂರು ಅವರ ನಿಧನದ ಕಾರಣದಿಂದ ಸಭೆಯನ್ನು ಮುಂದೂಡಲಾಗಿದೆ. ಭಾನುವಾರ ಝೂಮ್ ಆ್ಯಪ್ ಮೂಲಕ ವರ್ಚ್ಯುಯಲ್ ಆಗಿ ಸಭೆ ನಡೆಸಲಾಗುವುದು' ಎಂದು ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.