ADVERTISEMENT

ಡಿ.ಕೆ. ಶಿ‌ವಕುಮಾರ್‌ಗೆ ಅಧಿಕಾರ ಹಸ್ತಾಂತರಿಸಿದ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 7:03 IST
Last Updated 2 ಜುಲೈ 2020, 7:03 IST
ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್‌ಗೆ ಅಧಿಕಾರ ಹಸ್ತಾಂತರ
ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್‌ಗೆ ಅಧಿಕಾರ ಹಸ್ತಾಂತರ   

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭ ಹಲವು ನಾಯಕರು ಜ್ಯೋತಿ ಬೆಳಗುವ ಮೂಲಕ ಆರಂಭವಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಸ್ವಾಗತ ಭಾಷಣದ ಬಳಿಕ ಐದೈದು ನಾಯಕರ ತಂಡಗಳಿಂದ ಜ್ಯೋತಿ ಬೆಳಗಿಸಲಾಯಿತು.

ಕೊರೊನಾ ಕಾರಣಕ್ಕೆ ಅಂತರ ಕಾಪಾಡುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ರಾಜ್ಯದ 7,800 ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯ ಸುತ್ತಲೂ ಬೃಹತ್ ಡಿಜಿಟಲ್ ಪರದೆಗಳನ್ನು ಅಳವಡಿಸಲಾಗಿದೆ.

ಕಚೇರಿಯತ್ತ ಬರುವ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಸುಮಾರು 200 ಮಂದಿಗಷ್ಟೇ ಕೆಪಿಸಿಸಿ ಸಭಾಂಗಣದೊಳಗೆ ಪ್ರವೇಶಿಸುವ ಅವಕಾಶ ನೀಡಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.