ADVERTISEMENT

ಡಿ.ಕೆ. ಶಿ‌ವಕುಮಾರ್‌ಗೆ ಅಧಿಕಾರ ಹಸ್ತಾಂತರಿಸಿದ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 7:03 IST
Last Updated 2 ಜುಲೈ 2020, 7:03 IST
ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್‌ಗೆ ಅಧಿಕಾರ ಹಸ್ತಾಂತರ
ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್‌ಗೆ ಅಧಿಕಾರ ಹಸ್ತಾಂತರ   

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭ ಹಲವು ನಾಯಕರು ಜ್ಯೋತಿ ಬೆಳಗುವ ಮೂಲಕ ಆರಂಭವಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಸ್ವಾಗತ ಭಾಷಣದ ಬಳಿಕ ಐದೈದು ನಾಯಕರ ತಂಡಗಳಿಂದ ಜ್ಯೋತಿ ಬೆಳಗಿಸಲಾಯಿತು.

ಕೊರೊನಾ ಕಾರಣಕ್ಕೆ ಅಂತರ ಕಾಪಾಡುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ರಾಜ್ಯದ 7,800 ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯ ಸುತ್ತಲೂ ಬೃಹತ್ ಡಿಜಿಟಲ್ ಪರದೆಗಳನ್ನು ಅಳವಡಿಸಲಾಗಿದೆ.

ಕಚೇರಿಯತ್ತ ಬರುವ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಸುಮಾರು 200 ಮಂದಿಗಷ್ಟೇ ಕೆಪಿಸಿಸಿ ಸಭಾಂಗಣದೊಳಗೆ ಪ್ರವೇಶಿಸುವ ಅವಕಾಶ ನೀಡಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.