ಬೆಂಗಳೂರು: ‘ರಾಜ್ಯದ ಹಲವು ನಗರಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಮಾದರಿ ಟೌನ್ಶಿಪ್ ನಿರ್ಮಾಣ ಮಾಡಲಾಗುವುದು’ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
‘ಕಾಸಿಯಾ’ ಸಂಸ್ಥೆ ಶನಿವಾರ ಆಯೋಜಿಸಿದ್ದ ಎಂಎಸ್ಎಂಇ ದಿನಾಚರಣೆಯಲ್ಲಿ ಕೋವಿಡ್ -19ರ ಉದ್ಯೋಗ ಸಹಾಯವಾಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಬೆಂಗಳೂರು ನಗರ ಹಾಗೂ ಯಾವ ಜಿಲ್ಲೆಗಳಲ್ಲಿ ಟೌನ್ಶಿಪ್ಗಳ ನಿರ್ಮಾಣವಾಗಬೇಕಿದೆ ಎಂಬ ಬಗ್ಗೆ ವರದಿಯನ್ನು ತಯಾರಿಸಲು ಹಾಗೂ ಅದರ ಭೌಗೋಳಿಕ ನಕ್ಷೆ ಹೊಂದಿರುವ ಸಮಗ್ರ ಪ್ರಸ್ತಾವನೆಯನ್ನು ಸಿದ್ದಪಡಿಸುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ನಗರಾಭಿವೃದ್ಧಿ ಇಲಾಖೆಯ ಒಪ್ಪಿಗೆಯನ್ನು ಪಡೆದುಕೊಂಡು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರಲಾಗುವುದು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.