ADVERTISEMENT

ಕುಕ್ಕರ್‌ ಬಾಂಬ್‌ ಸ್ಫೋಟ: ಆರೋಪಿ ವಿಚಾರಣೆ ಶುರು

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 20:28 IST
Last Updated 30 ನವೆಂಬರ್ 2022, 20:28 IST

ಮಂಗಳೂರು: ನಗರದ ಗರೋಡಿಯಲ್ಲಿ ನ.19ರಂದು ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಮೊಹಮ್ಮದ್‌ ಶಾರಿಕ್‌ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧ
ವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಂಬ್‌ ಸ್ಫೋಟದಿಂದ ಆರೋಪಿಯ ದೇಹದ ಶೇ 45ರಷ್ಟು ಭಾಗದಲ್ಲಿ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲು ವೈದ್ಯರ ತಂಡ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಎನ್‌ಐಎ ಅಧಿಕಾರಿಗಳ ತಂಡವು ನಗರಕ್ಕೆ ಬಂದಿದೆ. ಆರೋಪಿಯನ್ನು ಸ್ಥಳೀಯ ಪೊಲೀಸ್‌ ಅಧಿಕಾರಿಗಳ ನೆರವಿ
ನಿಂದ ಕೆಲ ಕಾಲ ವಿಚಾರಣೆಗೆ ಒಳಪಡಿ
ಸಿದೆ’ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.