ಬೆಂಗಳೂರು: ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ. ಅದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯನವರು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದು ಕೆಲ ಪತ್ರಿಕೆಗಳು ವರದಿ ಮಾಡಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
ಜ್ವರ, ಶೀತ, ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ ಎಂದು ಜನರಿಗೆ ಮನವಿ ಮಾಡಿರುವ ಅವರು, ‘ಕೆಲವು ಪತ್ರಿಕೆಗಳ ವರದಿಯಂತೆ ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ.ಅಮಾಡಿದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ. ಜ್ವರ, ಶೀತ, ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ. ಅನುಮಾನ ಬಂದರೆ ಆರೋಗ್ಯ ಇಲಾಖೆ ಸಂಪರ್ಕಿಸಿ ಸರಿಯಾದ ಕ್ರಮದಲ್ಲಿ ಕೊರೊನಾ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟಿಸಿದ್ದಾರೆ.
ದೇಶದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 170ಕ್ಕೆ ಏರಿದ್ದು, ಕರ್ನಾಟಕದಲ್ಲಿ 15 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.