ADVERTISEMENT

ಕೊರೊನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 22:31 IST
Last Updated 27 ಮಾರ್ಚ್ 2020, 22:31 IST
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ   

ಬೆಂಗಳೂರು: ಕೋವಿಡ್‌–19ಕ್ಕೆತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ 60 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಇದರಿಂದಾಗಿರಾಜ್ಯದಲ್ಲಿಸಾವಿನಸಂಖ್ಯೆ3ಕ್ಕೆಏರಿಕೆಯಾಗಿದೆ. ಶುಕ್ರವಾರ 9 ‌ಪ್ರಕರಣಗಳು ವರದಿಯಾಗಿದ್ದು, ಸೋಂಕಿತರಸಂಖ್ಯೆ64ಕ್ಕೆ ತಲುಪಿದೆ.

ಕಲಬುರ್ಗಿಯ ಮೊಹ್ಮದ್ ಹುಸೇನ್ ಸಿದ್ಧಿಕಿ ಕಳೆದ ಮಾ.10ರಂದು ಈ ಸೋಂಕಿನಿಂದ ಮೃತಪಟ್ಟಿದ್ದರು. ಮೆಕ್ಕಾದಿಂದ ಬೆಂಗಳೂರಿಗೆ ಬಂದಿದ್ದಚಿಕ್ಕಬಳ್ಳಾಪುರದ 70 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆಯೇ ಮಾ.24 ನಿಧನರಾಗಿದ್ದರು. ಈ ಇಬ್ಬರೂ ಕೊರೊನಾ ಸೋಂಕಿನಿಂದಲೇ ಸತ್ತಿದ್ದಾರೆ ಎನ್ನುವುದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೃಢಪಟ್ಟಿತ್ತು. ಶುಕ್ರವಾರ ಮೃತಪಟ್ಟ ಶಿರಾದ ನಿವಾಸಿಮಾ.13 ರಂದು ದೆಹಲಿಗೆ ರೈಲಿನಲ್ಲಿ ಹೋಗಿದ್ದರು.

ಇವರೊಂದಿಗೆ ನೇರ ಸಂಪರ್ಕ ಹೊಂದಿದ್ದ24 ಮಂದಿಯನ್ನು ಗುರುತಿಸಿ, ಪ್ರತ್ಯೇಕಿಸಲಾಗಿದೆ.ದಕ್ಷಿಣ ಕನ್ನಡದಲ್ಲಿ 10 ತಿಂಗಳ ಗಂಡು ಮಗುವಿಗೆ ಸೋಂಕು ತಗುಲಿದೆ. ಈ ಮಗು ಯಾವುದೇ ಕೋವಿಡ್‌–19 ಪ್ರಭಾವಿತ ದೇಶಕ್ಕೆ ಪ್ರಯಾಣಿಸಿದ ಹಿನ್ನೆಲೆ ಹೊಂದಿಲ್ಲ. ಆದರೆ, ಪೋಷಕರು ಮಗುವಿನೊಂದಿಗೆ ಕೆಲದಿನಗಳ ಹಿಂದೆ ಕೇರಳಕ್ಕೆ ಭೇಟಿ ನೀಡಿದ್ದರು. ಹೊಸದಾಗಿ ಬೆಂಗಳೂರಿನಲ್ಲಿ 4, ತುಮಕೂರು, ಉತ್ತರ ಕನ್ನಡ, ದಾವಣಗೆರೆಯಲ್ಲಿ ತಲಾ 1 ಹಾಗೂ ದಕ್ಷಿಣ ಕನ್ನಡದಲ್ಲಿಎರಡು ಪ್ರಕರಣಗಳು ವರದಿಯಾಗಿವೆ. 12 ಮಂದಿಯನ್ನು ಸೋಂಕು ಶಂಕೆ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.