ADVERTISEMENT

ಕೊರೊನಾ ಕಾರಣ ಶಾಲೆ ಆರಂಭ ಬೇಡ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 12:04 IST
Last Updated 11 ಜೂನ್ 2020, 12:04 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಚಿತ್ರದುರ್ಗ: ‘ಕೊರೊನಾ ಮುಕ್ತ ರಾಜ್ಯ ನಿರ್ಮಾಣ ಆಗುವವರೆಗೂ 10ನೇ ತರಗತಿವರೆಗೆ ಶಾಲೆ ಆರಂಭಿಸದಿರುವುದೇ ಸೂಕ್ತ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸರ್ಕಾರವನ್ನು ಒತ್ತಾಯಿಸಿದರು.

ಮುರುಘಾಮಠಕ್ಕೆ ಗುರುವಾರ ಭೇಟಿ ನೀಡಿದ ನಂತರ ಮಾತನಾಡಿದ ಅವರು, ‘ಒಂದನೇ ತರಗತಿಯಿಂದ ಪಿಯುವರೆಗೆ ಆನ್‌ಲೈನ್ ಶಿಕ್ಷಣ ಸಾಧ್ಯವಿಲ್ಲ. ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ರೀತಿ ಶಿಕ್ಷಣ ನೀಡುವುದು ಅಪಾಯಕಾರಿ. ಕೊರೊನಾ ಹಿನ್ನೆಲೆಯಲ್ಲಿ ಅನೇಕ ಸಂಸ್ಥೆಗಳು ಇದಕ್ಕೆ ಒತ್ತು ನೀಡುತ್ತಿದ್ದು, ಇದು ಸರಿಯಲ್ಲ’ ಎಂದರು.

‘ದಸರಾ ರಜೆ ರದ್ದು ಮಾಡಬೇಕು. ಜಯಂತಿ ಆಚರಣೆ ದಿನದ ರಜೆಗಳನ್ನು ರದ್ದುಗೊಳಿಸಬೇಕು. ಅಗತ್ಯ ಮುಂಜಾಗ್ರತಾ ಕ್ರಮದೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.