ಬೆಂಗಳೂರು: ಇಂದಿರಾನಗರದ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಸೋಂಕು ಪೀಡಿತನೊಬ್ಬಮಂಗಳವಾರ ಬೆಳಿಗ್ಗೆ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಆಂಧ್ರಪ್ರದೇಶದ 58 ವರ್ಷದ ವ್ಯಕ್ತಿ, ಅಮೆರಿಕದಿಂದ ಇತ್ತೀಚೆಗೆ ನಗರಕ್ಕೆ ಬಂದಿದ್ದ. ಇಂದಿರಾನಗರದ ಮನೆಯೊಂದರಲ್ಲಿ ಉಳಿದುಕೊಂಡಿದ್ದರು. ಇತ್ತೀಚೆಗೆ ಜ್ವರ, ನೆಗಡಿ ಕಾಣಿಸಿಕೊಂಡಿತ್ತು.ಅವರನ್ನು ಸಿ.ವಿ.ರಾಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ನಡೆಸಿ ಗಂಟಲು ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದಾದ ಕೆಲವೇ ಗಂಟೆಗಳಲ್ಲಿ ವ್ಯಕ್ತಿ, ಆಸ್ಪತ್ರೆ ಬೆಡ್ನಿಂದ ನಾಪತ್ತೆಯಾಗಿದ್ದಾನೆ.
ಇದರಿಂದ ಆತಂಕಗೊಂಡ ಆಸ್ಪತ್ರೆ ಸಿಬ್ಬಂದಿ, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಇಂದಿರಾನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
‘ಶಂಕಿತನ ಆರೋಗ್ಯ ತಪಾಸಣೆ ವರದಿ ಇನ್ನು ಬಂದಿಲ್ಲ. ಅದರ ನಡುವೆಯೇ ಆತ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.