ಹೊಸಪೇಟೆ: ‘ವಿವಿಧ ದೇಶಗಳಿಂದ ಬಳ್ಳಾರಿ ಜಿಲ್ಲೆಗೆ 209 ಜನ ಹಿಂತಿರುಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
‘ಸೋಮವಾರ ಒಂದೇ ದಿನ 29 ಜನ ಬೇರೆ ದೇಶಗಳಿಂದ ಜಿಲ್ಲೆಗೆ ಬಂದಿದ್ದಾರೆ. ಎಲ್ಲರಿಗೂ ಮನೆಯಿಂದ ಹೊರ ಹೋಗದಂತೆ ಸೂಚಿಸಲಾಗಿದೆ. ಅವರ ಮೇಲೆ ನಿಗಾ ಇಡುವಂತೆ ಸಿಬ್ಬಂದಿಗೂ ಸೂಚಿಸಲಾಗಿದೆ. ಇದುವರೆಗೆ ಒಟ್ಟು 19 ಜನರ ಗಂಟಲಿನ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 16 ಜನರ ಮಾದರಿ ನೆಗೆಟಿವ್ ಬಂದಿದ್ದು, ಮೂವರ ವರದಿ ಇನ್ನಷ್ಟೇ ಕೈಸೇರಬೇಕಿದೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.