ಬೆಂಗಳೂರು: ರಾಜ್ಯದ ವಿವಿಧೆಡೆ ಕೋವಿಡ್-19ಗೆ ಸಂಬಂಧಿಸಿದಂತೆ ಗುರುವಾರ ಕಂಡು ಬಂದ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.
ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿ ಮಾರ್ಚ್ 24ರಿಂದ ಏ.8ರ ವರೆಗೆ ನಡೆಯಬೇಕಿದ್ದ ದನಗಳ ಜಾತ್ರೆ, ರಥೋತ್ಸವ ರದ್ದು.
ಬ್ಯಾಡಗಿ:ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆ ಏ.1ರವರೆಗೆ ಬಂದ್.
ಶಿಡ್ಲಘಟ್ಟ:ಕೊರೊನಾ ಭೀತಿಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿರುವ ಮಾಲ್ಡೊವಾ ದೇಶದಲ್ಲಿ ರಾಜ್ಯದ 10 ವಿದ್ಯಾರ್ಥಿಗಳು ಸಿಲುಕಿದ್ದಾರೆ.
ನಾಗಮಂಗಲ: ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ತಮ್ಮ ಯಾತ್ರೆಯನ್ನು ಎರಡು ವಾರಗಳವರೆಗೆ ಮುಂದೂಡಬೇಕು ಎಂದು ಮಠ ಮನವಿ ಮಾಡಿದೆ.
ಉಡುಪಿ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.