ADVERTISEMENT

Covid-19 Karnataka Update: ಒಂದೇ ದಿನ 515 ಪ್ರಕರಣ, ಉಡುಪಿಯಲ್ಲೇ 204 ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2020, 12:33 IST
Last Updated 5 ಜೂನ್ 2020, 12:33 IST
ಕೊರೊನಾ ವೈರಸ್‌ ಸೋಂಕು–ಸಾಂಕೇತಿಕ ಚಿತ್ರ
ಕೊರೊನಾ ವೈರಸ್‌ ಸೋಂಕು–ಸಾಂಕೇತಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯ ಕೋವಿಡ್‌–19 ದೃಢಪಟ್ಟ 515 ಪ್ರಕರಣಗಳು ದಾಖಲಾಗಿವೆ. ಈವರೆಗೆ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 4,835 ತಲುಪಿದೆ.

ಪ್ರಸ್ತುತ ರಾಜ್ಯದ ನಿಗದಿತ ಆಸ್ಪತ್ರೆಗಳಲ್ಲಿ 3,088 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ 57 ಮಂದಿ ಸಾವಿಗೀಡಾಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ 83 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1,688 ಮಂದಿ ಗುಣಮುಖರಾಗಿದ್ದಾರೆ.

ಒಂದೇ ಅತಿ ಹೆಚ್ಚು 204 ಪ್ರಕರಣಗಳು ಉಡುಪಿಯಲ್ಲಿ ದಾಖಲಾಗಿದೆ. ಯಾದಗಿರಿಯಲ್ಲಿ 74, ಕಲಬುರ್ಗಿ 42, ಬೆಂಗಳೂರು ನಗರದಲ್ಲಿ 10, ಬೆಳಗಾವಿಯಲ್ಲಿ 36, ಬೀದರ್‌ನಲ್ಲಿ 39, ವಿಜಯಪುರ 53, ಬೆಂಗಳೂರು ಗ್ರಾಮಾಂತರ 12, ಮಂಡ್ಯದಲ್ಲಿ 13 ಹಾಗೂ ದಕ್ಷಿಣ ಕನ್ನಡದಲ್ಲಿ 8 ಕೋವಿಡ್‌–19 ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿವೆ.

ADVERTISEMENT

ರಾಜ್ಯದಲ್ಲೇ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆಗಳಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 768ಕ್ಕೇರಿಕೆಯಾಗಿದ್ದು, 685 ಸಕ್ರಿಯ ಪ್ರಕರಣಗಳಿವೆ. 82 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.