ADVERTISEMENT

Covid-19 Karnataka Update: ಕಳೆದ 24 ಗಂಟೆಗಳಲ್ಲಿ 9,575 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 14:31 IST
Last Updated 6 ಸೆಪ್ಟೆಂಬರ್ 2020, 14:31 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್‌–19ನಿಂದ 9,575 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 9,319 ಹೊಸ ಪ್ರಕರಣಗಳು ದಾಖಲಾಗಿವೆ.

ಪ್ರಸ್ತುತ ರಾಜ್ಯದಲ್ಲಿ 99,266 ಕೋವಿಡ್‌ ಪ್ರಕರಣಗಳಿದ್ದು, ಈವರೆಗೂ 2,92,873 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 95 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 3,98,551 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6,393 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 2,824 ಹೊಸ ಪ್ರಕರಣಗಳು ದಾಖಲಾಗಿವೆ, 38 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 4,540 ಜನ ಗುಣಮುಖರಾಗಿದ್ದಾರೆ.

ADVERTISEMENT

ಮೈಸೂರಿನಲ್ಲಿ 686 ಹೊಸ ಪ್ರಕರಣಗಳು ದಾಖಲಾಗಿದ್ದು, 5 ಮಂದಿ ಸಾವಿಗೀಡಾಗಿದ್ದಾರೆ. 435 ಮಂದಿ ಗುಣಮುಖರಾಗಿದ್ದಾರೆ. ಬೆಳಗಾವಿಯಲ್ಲಿ 427 ಹೊಸ ಪ್ರಕರಣಗಳು, 8 ಜನ ಮೃತಪಟ್ಟಿರುವುದಾಗಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.