ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್–19ನಿಂದ 8,015 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟ 5,773 ಹೊಸ ಪ್ರಕರಣಗಳು ದಾಖಲಾಗಿವೆ.
ಪ್ರಸ್ತುತ ರಾಜ್ಯದಲ್ಲಿ 97,001 ಕೋವಿಡ್ ಪ್ರಕರಣಗಳಿದ್ದು, ಈವರೆಗೂ 3,00,770 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 141 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 4,04,324 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6,534 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 2,942 ಹೊಸ ಪ್ರಕರಣಗಳು ದಾಖಲಾಗಿವೆ, 48 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 2,935 ಜನ ಗುಣಮುಖರಾಗಿದ್ದಾರೆ. ಒಟ್ಟು 1,50,523 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿವೆ.
ಮೈಸೂರಿನಲ್ಲಿ 221 ಹೊಸ ಪ್ರಕರಣಗಳು ದಾಖಲಾಗಿದ್ದು, 9 ಮಂದಿ ಸಾವಿಗೀಡಾಗಿದ್ದಾರೆ. 199 ಮಂದಿ ಗುಣಮುಖರಾಗಿದ್ದಾರೆ. ಬಳ್ಳಾರಿಯಲ್ಲಿ 266 ಹೊಸ ಪ್ರಕರಣಗಳು, 7 ಜನ ಮೃತಪಟ್ಟಿದ್ದಾರೆ ಹಾಗೂ 652 ಮಂದಿ ಗುಣಮುಖರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.