ADVERTISEMENT

ಡಿಕೆಶಿ ರೀತಿ ಕೀಳುಮಟ್ಟದ ರಾಜಕಾರಣ ಮಾಡುವುದಿಲ್ಲ: ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2020, 7:31 IST
Last Updated 14 ಏಪ್ರಿಲ್ 2020, 7:31 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್    

ಚಿಕ್ಕಬಳ್ಳಾಪುರ:‘ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಂತೆ ಕೀಳುಮಟ್ಟದ ರಾಜಕಾರಣ ಮಾಡುವುದಿಲ್ಲ’ಎಂದು‌ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಈವರೆಗೆ ಡಿ.ಕೆ.ಶಿವಕುಮಾರ್ ಅವರ ಸದ್ಗುಣಗಳು ಮಾತ್ರ ಗೊತ್ತಿತ್ತು. ಆದರೆ, ಅವರ ದೊಡ್ಡ ಗುಣ ಗೊತ್ತಿರಲಿಲ್ಲ’ಎಂದು ವ್ಯಂಗ್ಯವಾಡಿದರು.

ಸುಧಾಕರ್ ಅವರು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿರುವ ಈಜುಕೊಳದಲ್ಲಿ ಭಾನುವಾರ ಮಕ್ಕಳೊಂದಿಗೆ ಈಜಾಟವಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದ್ದರು.

ADVERTISEMENT

ಅದಕ್ಕೆ ಡಿ.ಕೆ.ಶಿವಕುಮಾರ್ ಅವರು, ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ನೈತಿಕತೆಯ ವಿಚಾರ. ಸುಧಾಕರ್ ಅವರು ಸ್ವ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿ ಅವರು ಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸಬೇಕು’ಎಂದು ಟೀಕಿಸಿದ್ದರು.

ಇದರ ಬೆನ್ನಲ್ಲೇ ತಮ್ಮ ಟ್ವೀಟ್‌ ವಿವಾದ ಸೃಷ್ಟಿಸುತ್ತದೆ ಎಂಬುದು ಅರಿವಿಗೆ ಬರುತ್ತಿದ್ದಂತೆ ಸುಧಾಕರ್ ಅವರು ಅದನ್ನು ತಮ್ಮ ಖಾತೆಯಿಂದ ಅಳಿಸಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.