ADVERTISEMENT

ಬಾದಾಮಿಯಲ್ಲಿ ಕೊರೊನಾ: ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಚರ್ಚೆ

​ಪ್ರಜಾವಾಣಿ ವಾರ್ತೆ
Published 6 ಮೇ 2020, 8:58 IST
Last Updated 6 ಮೇ 2020, 8:58 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಕೊರೊನಾ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ ಅವರು ತಾಲ್ಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌

13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ‌ ಸೋಂಕು ಹರಡದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಸೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ADVERTISEMENT

ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.