ADVERTISEMENT

Covid-19 Karnataka Update | ಒಂದೇ ದಿನ 4,077 ಮಂದಿ ಗುಣಮುಖ

ರಾಜ್ಯದಲ್ಲಿ 5,532 ಹೊಸ ಕೋವಿಡ್ ಪ್ರಕರಣ, 84 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಆಗಸ್ಟ್ 2020, 14:30 IST
Last Updated 2 ಆಗಸ್ಟ್ 2020, 14:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು:ಕೋವಿಡ್‌ ಸೋಂಕಿತರಲ್ಲಿ ಭಾನುವಾರ ಒಂದೇ ದಿನ 4 ಸಾವಿರಕ್ಕೂ ಅಧಿಕ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 57,725ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 5,532 ಮಂದಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1.34 ಲಕ್ಷಕ್ಕೆ ತಲುಪಿದೆ. ಸೋಂಕಿತರಲ್ಲಿ ಮತ್ತೆ 84 ಮಂದಿ ಮೃತಪಟ್ಟಿರುವುದು ಖಚಿತವಾಗಿದ್ದು, ಒಟ್ಟು ಮೃತರ ಸಂಖ್ಯೆ 2,496ಕ್ಕೆ ಏರಿದೆ.

ಬೆಂಗಳೂರಿನಲ್ಲಿ ಒಂದೇ ದಿನ 2105 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 59,501ಕ್ಕೆ ತಲುಪಿದೆ. ಮೃತಪಟ್ಟವರ ಸಂಖ್ಯೆ 1077ಕ್ಕೆ ಏರಿದೆ. ಸದ್ಯ ರಾಜ್ಯದಲ್ಲಿ 74, 590 ಪ್ರಕರಣಗಳು ಇವೆ. 638 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬಳ್ಳಾರಿ 377, ಕಲಬುರ್ಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ಧಾರವಾಡ 181, ದಾವಣಗೆರೆ 178, ಬೆಳಗಾವಿ 172, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್‌ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗದಲ್ಲಿ 99 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.