ADVERTISEMENT

Covid-19 Karnataka Update: 20 ದಿನ: 1.20 ಲಕ್ಷ ಜನ ಗುಣಮುಖ

ರಾಜ್ಯದಲ್ಲಿ 7,385 ಹೊಸ ಪ್ರಕರಣ, 102 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಆಗಸ್ಟ್ 2020, 18:58 IST
Last Updated 20 ಆಗಸ್ಟ್ 2020, 18:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು:ಕೊರೊನಾ ಸೋಂಕಿತರಲ್ಲಿ ಗುರುವಾರ 6,231 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 1.70 ಲಕ್ಷಕ್ಕೆ ಏರಿಕೆಯಾಗಿದೆ.

20 ದಿನಗಳಲ್ಲಿ 1,20,593 ಮಂದಿ ಗುಣಮುಖರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6,029 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ನಿತ್ಯ 50 ಸಾವಿರಕ್ಕೂ ಅಧಿಕ ಕೋವಿಡ್‌ ಪರೀಕ್ಷೆ ನಡೆಯುತ್ತಿದ್ದು, ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಗುರುವಾರ ಮತ್ತೆ 7,385 ಕೋವಿಡ್ ಪ್ರಕರಣಗಳು ಗುರುವಾರ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2.56 ಲಕ್ಷ ದಾಟಿದೆ. ಮತ್ತೆ 102 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 4,429ಕ್ಕೆ ತಲುಪಿದೆ.

ರಾಜ್ಯದಲ್ಲಿ 48 ಗಂಟೆಗಳಲ್ಲಿ 14,877 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 6,643 ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ 705 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ADVERTISEMENT

ಸದ್ಯ ರಾಜ್ಯದಲ್ಲಿ 82,149 ಸಕ್ರಿಯ‌ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.