ಬೆಂಗಳೂರು: ರಾಜ್ಯದಾದ್ಯಂತ ಭಾನುವಾರ ಒಂದೇ ದಿನ 7,101 ಗುಣಮುಖರಾಗಿದ್ದಾರೆ.ಇದುವರೆಗೆ 2,42,229 ಮಂದಿ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ.
ಇಂದು 8,852 ಹೊಸ ಪ್ರಕರಣಗಳು ವರದಿಯಾಗಿದ್ದು, 106 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,35,928 ಕ್ಕೆ ಏರಿಕೆಯಾಗಿದೆ. ಇದುವರೆಗೆ 5,589 ಮಂದಿ ಸಾವಿಗೀಡಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 2,821 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ.ಸದ್ಯ ರಾಜದಾದ್ಯಂತ 88,091 ಪ್ರಕರಣಗಳಿದ್ದು, ಐಸಿಯುನಲ್ಲಿ 730 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ 734, ಬಳ್ಳಾರಿ 428, ದಾವಣಗೆರೆ 373, ಬೆಳಗಾವಿ 357, ದಕ್ಷಿಣ ಕನ್ನಡ 334, ತುಮಕೂರು 314, ಧಾರವಾಡ 300, ಶಿವಮೊಗ್ಗ 292, ಹಾಸನ 268, ಉಡುಪಿ 254, ಕಲಬುರ್ಗಿ 199, ಗದಗದಲ್ಲಿ 196 ಹೊಸ ಪ್ರಕರಣಗಳು ದೃಢಪಟ್ಟಿವೆ.
66,957 ಜನರಿಗೆ ಕೋವಿಡ್ ಟೆಸ್ಟ್
ಭಾನುವಾರ ಒಂದೇ ದಿನ ಒಟ್ಟು 66,957 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 28,52,675 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 26,716 ಆ್ಯಂಟಿಜೆನ್ ಪರೀಕ್ಷೆ ಮತ್ತು 40781 ಮಂದಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.