ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಅರಣ್ಯ ಸಚಿವ ಆನಂದ್ ಸಿಂಗ್ ಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ.
‘ಪರೀಕ್ಷೆಯಿಂದ ಸಚಿವರಿಗೆ ಕೋವಿಡ್ ಇರುವುದು ತಿಳಿದುಬಂದಿದೆ. ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ವೈದ್ಯರು ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಯಾರಿಂದ ಸೋಂಕು ತಗುಲಿದೆ ಎನ್ನುವುದು ಗೊತ್ತಾಗಿಲ್ಲ’ ಎಂದು ಸಚಿವರ ಅಳಿಯ ಸಂದೀಪ್ ಸಿಂಗ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಸಚಿವರ ಕಾರಿನ ಚಾಲಕನಿಗೆ ಸೋಂಕು ತಗುಲಿತ್ತು. ಅದಾದ ಬಳಿಕ ಸಚಿವರ ರಾಣಿಪೇಟೆಯಲ್ಲಿನ ಹಳೆಯ ನಿವಾಸ ಸೀಲ್ಡೌನ್ ಮಾಡಲಾಗಿತ್ತು. ಬಳಿಕ ಅವರು ವರ್ತುಲ ರಸ್ತೆಯ ಬಂಗ್ಲೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದರು.
‘ಸಚಿವರು ಹಿಂದಿನ ಭಾನುವಾರ ನಗರದಲ್ಲಿ ವೈದ್ಯರು, ಹೋಟೆಲ್ ಮಾಲೀಕರೊಂದಿಗೆ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಅಧಿಕಾರಿಗಳು, ವೈದ್ಯರು, ಹೋಟೆಲ್ ಮಾಲೀಕರು, ಪತ್ರಕರ್ತರು ಪಾಲ್ಗೊಂಡಿದ್ದರು. ಅಂದಿನ ಸಭೆಯಲ್ಲಿ ಭಾಗವಹಿಸಿದವರು ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.