ADVERTISEMENT

Photos: ರಾಜ್ಯದಾದ್ಯಂತ ಕೋವಿಡ್ ಲಸಿಕೆ ವಿತರಣೆಯ ಅಣಕು ಕಾರ್ಯಾಚರಣೆ

ರಾಜ್ಯದಾದ್ಯಂತ ಕೋವಿಡ್‌ ಲಸಿಕೆ ವಿತರಣೆಯ ಅಣಕು ಕಾರ್ಯಚರಣೆಯನ್ನು ಶನಿವಾರ ನಡೆಸಲಾಯಿತು.ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ ವಿದ್ಯಾಪೀಠದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ಪಶ್ಚಿಮ ವಲಯದ ಕಾಮಾಕ್ಷಿಪಾಳ್ಯದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು (Dry Run) ನಡೆಯಿತು.ಕಲಬುರ್ಗಿ ಹಾಗೂ ಬೆಳಗಾವಿಯಲ್ಲಿಯೂ ಲಸಿಕೆ ತಾಲೀಮು ನಡೆಯಿತು. ಕಾರ್ಯಾಚರಣೆಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 7:37 IST
Last Updated 2 ಜನವರಿ 2021, 7:37 IST
- ಕಲಬುರ್ಗಿಯ ಅಶೋಕನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ಕೋವಿಡ್ ಲಸಿಕೆ ವಿತರಣೆಯ ಪೂರ್ವಾಭ್ಯಾಸ ಪರಿಶೀಲಿಸಿದರು.
- ಕಲಬುರ್ಗಿಯ ಅಶೋಕನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ಕೋವಿಡ್ ಲಸಿಕೆ ವಿತರಣೆಯ ಪೂರ್ವಾಭ್ಯಾಸ ಪರಿಶೀಲಿಸಿದರು.   
ಬೆಳಗಾವಿಯ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆದ ಕೋವಿಡ್ ಲಸಿಕೆ ಅಣಕು ಕಾರ್ಯಾಚರಣೆಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ವೀಕ್ಷಿಸಿದರು.
ಕಾಮಾಕ್ಷಿಪಾಳ್ಯದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಲಸಿಕೆ ವಿತರಣೆಯ ಅಣಕು ಪ್ರದರ್ಶನ ನಡೆಸಲಾಯಿತು
ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು ನಡೆಸಲಾಯಿತು
ಬೆಂಗಳೂರಿನ ವಿದ್ಯಾಪೀಠದಲ್ಲಿ ಕೋವಿಡ್‌ ಲಸಿಕೆ ವಿತರಣೆಯ ಅಣಕು ಪ್ರದರ್ಶನ ನಡೆಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.