ADVERTISEMENT

ಗೌರಿಬಿದನೂರು ಮಹಿಳೆ ಸಾವಿಗೆ ಕೊರೊನಾ ಕಾರಣ:  ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 6:17 IST
Last Updated 26 ಮಾರ್ಚ್ 2020, 6:17 IST
   

ಬಳ್ಳಾರಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೃದ್ಧೆಯು ಕೊರೊನಾಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಗುರುವಾರ ವೈದ್ಯರೊಂದಿಗೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಲಬುರ್ಗಿಯ ಈ ಮುಂಚೆ ಮೃತಪಟ್ಟವರು ಸೇರಿದಂತೆ ಈಗ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ ಎಂದರು.

ರಾಜ್ಯದಲ್ಲಿ ಇದುವರೆಗೆ 1.30 ಲಕ್ಷ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು,214 ಮಂದಿಯನ್ನು ಪ್ರತ್ಯೇಕ ವಾರ್ಡ್ ನಲ್ಲಿರಿಸಲಾಗಿದೆ. 2500 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು,2248 ಮಂದಿಗೆ ಸೋಂಕಿಲ್ಲ. ಆದರೆ 52 ಮಂದಿಗೆ ಸೋಂಕಿದೆ ಎಂದು ತಿಳಿಸಿದರು.

ADVERTISEMENT

ಲಾಕ್ಡೌನ್ ನಿಯಮ ಮೀರಿ ಬೀದಿಗೆ ಬರುತ್ತಿರುವವರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಅದಕ್ಕೆ ಮುನ್ನವೇ ಜನ ಎಚ್ಚೆತ್ತುಕೊಳ್ಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.