ADVERTISEMENT

ಕಕ್ಷಿದಾರರಿಗೆ ವಕೀಲರ ಪ್ರಮಾಣ ಪತ್ರ ಇದ್ದರೆ ಮಾತ್ರ ಕೋರ್ಟ್‌ ಪ್ರವೇಶ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 11:56 IST
Last Updated 18 ಮಾರ್ಚ್ 2020, 11:56 IST
   

ಬೆಂಗಳೂರು:ಹೈಕೋರ್ಟ್ ಸೇರಿದಂತೆ ನಗರದ ಎಲ್ಲ ಕೋರ್ಟ್ ಗಳಲ್ಲಿ ಕಕ್ಷಿದಾರರಿಗೆ ತಮ್ಮ ವಕೀಲರಿಂದ ಪ್ರಮಾಣ ಪತ್ರ ಇದ್ದರೆ ಮಾತ್ರ ಒಳ ಪ್ರವೇಶಿಸಲು ಅವಕಾಶ ಎಂದು ನಿರ್ಬಂಧ ವಿಧಿಸಲಾಗಿದೆ.

ಈ ವಿಷಯವನ್ನು ಬುಧವಾರ ಪ್ರಕರಣವೊಂದರ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಸ್ವತಃ ತಿಳಿಸಿದರು.

"ಈ ಸಂಬಂಧ ಬುಧವಾರ ಮಧ್ಯಾಹ್ನ ಬೆಂಗಳೂರು ವಕೀಲರ ಸಂಘದ ಜೊತೆ ಚರ್ಚಿಸಲಾಗಿದೆ. ಇಂತಹ ಸನ್ನಿವೇಶದಲ್ಲೇ ನಿನ್ನೆ 14 ಸಾವಿರ ಜನರು ಬಂದು ಹೋಗಿದ್ದಾರೆ ಎಂಬುದು ಕಳವಳಕಾರಿ ವಿಚಾರ. ಹಾಗಾಗಿ ಕಕ್ಷಿದಾರರ ಹಾಜರಿ ಕಡ್ಡಾಯ ಎಂದಾದರೆ ಮಾತ್ರ ವಕೀಲರ ಪ್ರಮಾಣ ಪತ್ರ ತೋರಿಸಿ ಒಳ ಬರಬೇಕು" ಎಂದರು.

ADVERTISEMENT

ಕೋರ್ಟ್‌ಗೆ ಬರುತ್ತಿರುವ ಅನೇಕ ಕಕ್ಷಿದಾರರಲ್ಲಿ ತಾಪಮಾನದ ಪ್ರಮಾಣ ನಿಗದಿಗಿಂತ ಹೆಚ್ಚಿದೆ. ಹೀಗಾಗಿ ಕಕ್ಷಿದಾರರು ಕೋರ್ಟ್‌ಗೆ ಭೇಟಿ ನೀಡುವುದನ್ನು ನಿಯಂತ್ರಿಸಬೇಕಿದೆ. ಆದರೆ ಸರ್ಕಾರಿ ಅಧಿಕಾರಿಗಳು, ಪೊಲೀಸರು ಮತ್ತು ಸರ್ಕಾರಿ ವಕೀಲರಿಗೆ ನಿರ್ಬಂಧವಿಲ್ಲ" ಎಂದು ಮೌಖಿಕವಾಗಿ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.