ADVERTISEMENT

Covid-19 Karnataka Update | ಸೋಂಕಿತರ ಸಂಖ್ಯೆ ಇಳಿಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜೂನ್ 2020, 12:39 IST
Last Updated 10 ಜೂನ್ 2020, 12:39 IST
   

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಗುಣಮುಖರ ಸಂಖ್ಯೆ ಹೆಚ್ಚಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 120 ಹೊಸ ಪ್ರಕರಣಗಳು ವರದಿಯಾಗಿವೆ. 257 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6 ಸಾವಿರ ದಾಟಿದೆ.

ಒಂದು ದಿನದ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಮೂವರು ಮೃತಪಟ್ಟಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 69ಕ್ಕೆ ಮುಟ್ಟಿದೆ.

ADVERTISEMENT

ಜೂನ್ 9ರ ಸಂಜೆ 5ರಿಂದ ಜೂನ್ 10ರ ಸಂಜೆ 5ರ ಅವಧಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ವರದಿಯಾದ ಸೋಂಕು ಪ್ರಕರಣಗಳ ವಿವರ ಇಂತಿದೆ...

ಬೆಂಗಳೂರು ನಗರ 42, ಯಾದಗಿರಿ 27, ವಿಜಯಪುರ 13, ಕಲಬುರ್ಗಿ 11, ಬೀದರ್ 5, ದಕ್ಷಿಣ ಕನ್ನಡ ಮತ್ತು ಧಾರವಾಡ ತಲಾ 4, ದಾವಣಗೆರೆ, ಹುಬ್ಬಳ್ಳಿ ಮತ್ತು ಬಳ್ಳಾರಿ ತಲಾ 3, ಬಾಗಲಕೋಟೆ ಮತ್ತು ರಾಮನಗರ ತಲಾ 2, ಬೆಳಗಾವಿ 1.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.