ADVERTISEMENT

Covid-19 Karnataka Update: ರಾಜ್ಯದಲ್ಲಿ 414 ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 15:18 IST
Last Updated 14 ಫೆಬ್ರುವರಿ 2021, 15:18 IST
ಕೋವಿಡ್‌ ಲಸಿಕೆ ಪಡೆದ ಬಿಬಿಎಂಪಿ ಪೌರ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿರುವುದು
ಕೋವಿಡ್‌ ಲಸಿಕೆ ಪಡೆದ ಬಿಬಿಎಂಪಿ ಪೌರ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿರುವುದು   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌–19 ದೃಢಪಟ್ಟ 414 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಇಬ್ಬರು ಸಾವಿಗೀಡಾಗಿದ್ದಾರೆ.

ಭಾನುವಾರ 486 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ 5,836 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9,45,270 ಮುಟ್ಟಿದೆ. ಈ ಪೈಕಿ 9,27,150 ಮಂದಿ ಗುಣಮುಖರಾಗಿದ್ದು, 12,265 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಐಸಿಯುನಲ್ಲಿ 132 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 241 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 24, ಮೈಸೂರಿನಲ್ಲಿ 21, ತುಮಕೂರಿನಲ್ಲಿ 15, ಧಾರವಾಡದಲ್ಲಿ 14 ಹಾಗೂ ಉಡುಪಿಯಲ್ಲಿ 13 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.