ADVERTISEMENT

ಕೋವಿಡ್–19 | ರಾಜ್ಯದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2020, 8:20 IST
Last Updated 14 ಏಪ್ರಿಲ್ 2020, 8:20 IST
   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌–19ಸೋಂಕಿನಿಂದಾಗಿ ಮಂಗಳವಾರ ಮೂವರುಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಕಲಬುರ್ಗಿಯ 55 ವರ್ಷ ವಯಸ್ಸಿನ ವ್ಯಕ್ತಿ,ಬೆಂಗಳೂರಿನ 65 ವರ್ಷದ ವೃದ್ಧ ಹಾಗ ಗದಗ ಜಿಲ್ಲೆಯ 69 ವಯಸ್ಸಿನ ವೃದ್ಧ ಮೃತಪಟ್ಟವರು.

ಮಾತ್ರವಲ್ಲದೆ ಇಂದು11 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ258ಕ್ಕೆ ಏರಿಕೆಯಾಗಿದೆ.

ADVERTISEMENT

ಬಾಗಲಕೋಟೆ ಹಾಗೂ ಕಲಬುರ್ಗಿಯಲ್ಲಿ ತಲಾ ಮೂವರಿಗೆ ಸೊಂಕು ತಗುಲಿದೆ. ಬೆಂಗಳೂರಿನ ಇಬ್ಬರಲ್ಲಿ ಇಂದು ಸೋಂಕು ದೃಢ ಪಟ್ಟಿರುವುದರಿಂದ, ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಉಳಿದಂತೆ ಬೆಳಗಾವಿ, ವಿಜಯಪುರು ಹಾಗೂ ಚಿಕ್ಕಬಳ್ಳಾಪುರದ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ 10,000ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಲಾಕ್‌ಡೌನ್‌ ಅವಧಿಯನ್ನು ಮೇ 3ರ ವರೆಗೆ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.