ADVERTISEMENT

Covid-19 Karnataka Update: 8,191 ಮಂದಿಗೆ ಸೋಂಕು, 87 ಸಾವು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 15:22 IST
Last Updated 13 ಅಕ್ಟೋಬರ್ 2020, 15:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 8,191 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. 87 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಸಂಜೆ ತಿಳಿಸಿದೆ.

ಈವರೆಗೆ ರಾಜ್ಯದಲ್ಲಿ ಸೋಂಕಿತರಾದವರ ಸಂಖ್ಯೆ 7,26,106ಕ್ಕೆ ಏರಿಕೆಯಾಗಿದ್ದು, 10,123 ಜನ ಸಾವಿಗೀಡಾಗಿದ್ದಾರೆ. 6,02,505 ಸೋಂಕಿತರು ಗುಣಮುಖರಾಗಿದ್ದಾರೆ.

ಇಂದು (ಮಂಗಳವಾರ) 10,421 ಜನ ಚೇತರಿಸಿಕೊಂಡಿದ್ದಾರೆ. 919 ಸೋಂಕಿತರಿಗೆ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಾಜ್ಯಲ್ಲಿ ಒಟ್ಟು 1,13,459 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬೆಂಗಳೂರಿನಲ್ಲಿ ಒಂದೇ ದಿನ 3,776 ಜನರು ಸೋಂಕಿತರಾಗಿದ್ದು, 28 ಮಂದಿ ಅಸುನೀಗಿದ್ದಾರೆ. 63,789 ಸಕ್ರಿಯ ಪ್ರಕರಣಗಳಿವೆ.

ಸೋಂಕು ಪ್ರಕರಣಗಳ ಜಿಲ್ಲಾವಾರು ವಿವರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.